ಸಾಮಾಜಿಕ ಪ್ರಗತಿಯಲ್ಲಿ ಹೆಣ್ಣಿನ ಪಾತ್ರ ಮಹತ್ತರ :ಧನಲಕ್ಷ್ಮೀ ಗಟ್ಟಿ

ಬಂಟ್ವಾಳ: ಹೆಣ್ಣು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿನ ಎಲ್ಲಾ ಸೇವೆಯನ್ನು ನಿಸ್ವಾರ್ಥವಾಗಿ, ಮುಕ್ತ ಮನಸ್ಸಿನಿಂದ ಮಾಡುವ ಮೂಲಕ ದೇಶದ ಪ್ರಗತಿಯಲ್ಲಿ ಮುಖ್ಯ ಪಾತ್ರ ವಹಿಸಿರುವುದು ರಾಷ್ಟ್ರ ದ ಇತಿಹಾಸದಿಂದ ತಿಳಿದು ಬರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಹೇಳಿದರು.
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಹಿಳಾ ಮೋರ್ಚಾ ವತಿಯಿಂದ ಸಿದ್ದಕಟ್ಟೆಯ ಅಶ್ವಿನಿ ವಾಣಿಜ್ಯ ಸಂಕೀರ್ಣದ ಅಕ್ಷಯ ಸಭಾಭವನದಲ್ಲಿ ಏರ್ಪಡಿಸಿದ ಉಚಿತ ಆರೋಗ್ಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಮಹಿಳಾ ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ರಾಜ್ಯ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ ಭಟ್ ಮಾತನಾಡಿ ಮಹಿಳೆಯರು ಇತಿಹಾಸದಿಂದಲೂ ಹೋರಾಡಿ ಕೊಂಡು ಬಂದು,ದೇಶ ಕಟ್ಟುವ ವಿಚಾರದಲ್ಲಿ ಗಂಡಸರಿಗೆ ಸಮಾನವಾಗಿ ನಿಂತಿದ್ದಾರೆ ಎಂದರು.
ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ ಭಾರತ ದೇಶ ವಿಶ್ವಗುರು ಆಗಬೇಕಾದರೆ ಮಹಿಳೆಯರ ಪಾತ್ರ ಅಗತ್ಯ ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರು ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ ಎಂದರು.
ಪಕ್ಷದ ಸಂಘಟನೆಗಾಗಿ ಸೇವೆ ಸಲ್ಲಿಸಿದ ಹಿರಿಯ ಕಾರ್ಯಕರ್ತರಾದ ಆನಂದಿ ಪೂಜಾರಿ ವಾಮದಪದವು, ರೇವತಿ ಆರ್. ಪೂಜಾರಿ ಕರ್ಪೆ ದೋಟ ಮತ್ತು ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಗೈದ ರಮ್ಯಶ್ರೀ ಜೈನ್ ಸಿದ್ದಕಟ್ಟೆ ಇವರನ್ನು ಸೇರಿದಂತೆ ಸಾಧಕರನ್ನು ಗೌರವಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ರಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮನೋನ್ಮಣಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.


ಬಂಟ್ವಾಳ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಚೌಟ ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ತ್ರಿವೇಣಿ,
ಪಕ್ಷದ ಪ್ರಮುಖರಾದ ಹರ್ಷಿಣಿ ಪುಷ್ಪಾನಂದ, ಚಂದ್ರಾವತಿ ಕರಿಯಂಗಳ,ರತ್ನಕುಮಾರ್ ಚೌಟ, ಕಾವಳಪಡೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಮನಾಥ ರಾಯಿ, ಪ್ರದಾನ ಕಾರ್ಯದರ್ಶಿ ಪ್ರಭಾಕರ ಪ್ರಭು, ನರಿಕೊಂಬು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶೋಧರ ಕರ್ಬೇಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಸದಸ್ಯೆರಾದ ರೂಪ ಶೆಟ್ಟಿ ಅರಳ,ಉಷಾ, ಕಮಲಾಕ್ಷಿ ಪೂಜಾರಿ, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಂಘದ ನಿರ್ದೇಶಕ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಸಿದ್ದಕಟ್ಟೆ ಸಹಕಾರಿ ಸಂಘದ ನಿರ್ದೇಶಕ ಸಂದೇಶ ಶೆಟ್ಟಿ ಪೊಡುಂಬ, ಸಹಕಾರಿ ಸಂಘದ ಮುಖ್ಯ ಕಾರ್ಯ ಕಾರ್ಯನಿರ್ವಹಣಾ ಅಧಿಕಾರಿ ಆರತಿ ಶೆಟ್ಟಿ,ಸಂಗಬೆಟ್ಟು ಗ್ರಾಮ ಪಂಚಾಯತಿ ಅಧ್ಯಕ್ಷ ಸತೀಶ್ ಪೂಜಾರಿ, ಉಪಾಧ್ಯಕ್ಷೆ ವಿಮಲ ಮೋಹನ್,ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಆರ್ ಪೂಜಾರಿ, ಸಂಘಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸುನೀಲ್ ಶೆಟ್ಟಿಗಾರ್,ರಾಜೀವಿ ಪೂಜಾರಿ ಕರ್ಪೆ, ಬೇಬಿ ಪೂಜಾರಿ ಕುಕ್ಕಿಪಾಡಿ, ಪುರ್ಣಿಮಾ ಕುಕ್ಕಿಪಾಡಿ, ಲಿಂಗಪ್ಪ ಪೂಜಾರಿ ಕುಕ್ಕಿಪಾಡಿ, ಪುಷ್ಪ ಕುಕ್ಕಿಪಾಡಿ,
ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತರು ಮತ್ತು ಬಿಜೆಪಿ ಸದಸ್ಯರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಮಂದಾರತಿ ಎಸ್ ಶೆಟ್ಟಿ ಸಾಧಕರ ಪರಿಚಯ ವಾಚಿಸಿದರು.
ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ವಿದ್ಯಾ ಪ್ರಭು ಪ್ರಾರ್ಥಿಸಿದರು. ಬಂಟ್ವಾಳ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಪ್ರದಾನ ಕಾರ್ಯದರ್ಶಿ ಸೀಮಾ ಮಾಧವ ಸ್ವಾಗತಿಸಿದರು. ಕಾವಳಪಡೂರು ಮಹಾ ಶಕ್ತಿ ಕೇಂದ್ರ ಮಹಿಳಾ ಮೋರ್ಚಾದ ಸಂಚಾಲಕಿ ಪ್ರತಿಭಾ ಶೆಟ್ಟಿ ವಂದಿಸಿದರು.
ಬಂಟ್ವಾಳ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿ ಲಕಿತ.ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.