ಪದವು ಬಂಟರ ಭವನ, ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಬಂಟರ ಸಂಘ ವಾಮದಪದವು ವಲಯ ವತಿಯಿಂದ ಆಲದಪದವಿನಲ್ಲಿ ನಿರ್ಮಾಣಗೊಳ್ಳಲಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಗುರುವಾರ ಸಂಘದ ಕಚೇರಿಯಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಶಿಲಾನ್ಯಾಸ ಸಮಾರಂಭ ಮತ್ತು ಕಟ್ಟಡ ನಿರ್ಮಾಣ ಕಾರ್ಯಕ್ರಮದ ಯಶಸ್ವಿಗಾಗಿ ಸಮಾಜ ಭಾಂದವರು ಸಂಘಟಿತ ಪ್ರಯತ್ನ ನಡೆಸಬೇಕಾಗಿದೆ ಎಂದರು.

ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಬೆಳ್ಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಭಂಡಾರಿ, ಸಿದ್ಧಕಟ್ಟೆ ಬಂಟರ ಸಂಘದ ಅಧ್ಯಕ್ಷ ಪೊಡುಂಬ ಹೊಸಮನೆ ಸಂದೇಶ್ ಶೆಟ್ಟಿ, ಕಾವಳಕಟ್ಟೆ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಕೆದ್ದಳಿಕೆ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ವಾಮದಪದವು ವಲಯ ಬಂಟರ ಸಂಘದ ಗೌರವಾಧ್ಯಕ್ಷ ಅಮ್ಮು ರೈ ಹರ್ಕಾಡಿ, ಬಂಟ್ಸ್ ವೆಲ್ ಫೇರ್ ಎಸೋಶಿಯೇಶನ್ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಬುಳೇರಿ, ಮಹಿಳಾ ಘಟಕದ ಅಧ್ಯಕ್ಷೆ ಚೇತನಾ ರಾಮಚಂದ್ರ ಶೆಟ್ಟಿ, ಯುವ ಘಟಕದ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ ಉಪಸ್ಥಿತರಿದ್ದರು.

ವಾಮದಪದವು ವಲಯ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ ಸ್ವಾಗತಿಸಿದರು. ಉಪಾಧ್ಯಕ್ಷ ಯಶೋಧರ ಶೆಟ್ಟಿ ದಂಡೆ ವಂದಿಸಿದರು. ರಮೇಶ ಶೆಟ್ಟಿ ವಾಮದಪದವು ಕಾರ್ಯಕ್ರಮ ನಿರೂಪಿಸಿದರು.

ವರದಿ: ಗೋಪಾಲ ಅಂಚನ್