ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಎಂ.ತುಂಗಪ್ಪ ಬಂಗೇರಾ ನೇತೃತ್ವದಲ್ಲಿ ಎಪ್ರಿಲ್ 30ರಂದು ಪುಂಜಾಲಕಟ್ಟೆಯಲ್ಲಿ ಉಚಿತ ಸಾಮೂಹಿಕ ವಿವಾಹ ಮತ್ತು ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎಪ್ರಿಲ್ 30ರಂದು 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ, ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮತ್ತು ಸ್ವಸ್ತಿಸಿರಿ ರಾಜ್ಯಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕ್ಲಬ್ ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದ್ದಾರೆ.


ಪುಂಜಾಲಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ಈ ಬಾರಿ ಒಟ್ಟು 11 ಜೋಡಿಗಳು ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡಲಿದೆ ಎಂದರು.
ಈ ಜೋಡಿಗಳಿಗೆ ಸಾಮೂಹಿಕವಾಗಿ ಈಗಾಗಲೇ ನಿಶ್ಚಿತಾರ್ಥವನ್ನು ನೆರವೇರಿಸಲಾಗಿದ್ದು, ವೇ.ಮೂ.ಶ್ರೀಕೃಷ್ಣ ಭಟ್ ಕಾರ್ಕಳ ನೇತೃತ್ವದಲ್ಲಿ ವಿವಾಹ ಸಮಾರಂಭ ನೆರವೇರಲಿದೆ.
ಇದುವರೆಗೆ ಕ್ಲಬ್ ನ ವತಿಯಿಂದ ನಡೆದ ಸಾಮೂಹಿಕ ವಿವಾಹದಲ್ಲಿ ಒಟ್ಟು 462 ಮಂದಿಗೆ ವಿವಾಹ ಮಾಡಲಾಗಿದೆ. ಬಡ, ಹಿಂದುಳಿದ ವರ್ಗದ ಜನತೆ ಅದ್ಧೂರಿಯ ವಿವಾಹ ನಡೆಸಲು ಅಸಾಧ್ಯವಾದ ಕಾರಣ ಸಾಮೂಹಿಕ ವಿವಾಹದ ಮೂಲಕ ಅರ್ಥಪೂರ್ಣವಾಗಿ ವಿವಾಹ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಬೆಳಿಗ್ಗೆ ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಿಂದ ವಧು-ವರರ ದಿಬ್ಬಣ ಮೆರವಣಿಗೆ ವೈವಿಧ್ಯಮಯವಾಗಿ ಸಭಾಂಗಣಕ್ಕೆ ಸಾಗಿ ಬರಲಿದೆ.
ನವದೆಹಲಿ ಅನಾರೋಖ್ ಪ್ರೈ.ಲಿ.ನ ವೈಸ್ ಚೇಯರ್ ಮೆನ್ ಸಂತೋಷ್ ಜೆ.ಪಿ. ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದು,ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ಮಾಡಲಿದ್ದಾರೆ. ಗುತ್ತಿಗೆದಾರ ಪ್ರವೀಣ್ ಎಸ್.ದರ್ಭೆ ಮಂಗಲಸೂತ್ರ ವಿತರಿಸಲಿದ್ದಾರೆ. ಹಲವಾರು ಗಣ್ಯರು ಅತಿಥಿಗಳಾಗಿ ಈ ಸಂದರ್ಭ ಭಾಗವಹಿಸಲಿದ್ದಾರೆ ಎಂದು ತುಂಗಪ್ಪ ಬಂಗೇರಾ ತಿಳಿಸಿದರು.
ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯ ವೈದ್ಯ ಡಾ.ಸದಾನಂದ ಪೂಜಾರಿ (ವೈದ್ಯಕೀಯ), ವಿಜಯಕುಮಾರ್ ಕೊಡಿಯಾಲ್ ಬೈಲ್( ಕಲಾಕ್ಷೇತ್ರ) ಹಾಗೂ ಕಡಬ ಶ್ರೀನಿವಾಸ ರೈ ( ಯಕ್ಷಗಾನ ಕ್ಷೇತ್ರ) ಇವರಿಗೆ ಸ್ವಸ್ತಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು
ಪುಂಜಾಲಕಟ್ಟೆ ಆಸ್ಪತ್ರೆಯ ಆಶಾ ಕಾರ್ಯಕರ್ತೆಯರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.
ಕ್ಲಬ್ ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ರಾಜೇಶ್ ಬಂಗೇರ ಪುಳಿಮಜಲು, ಮಾಜಿ ಅಧ್ಯಕ್ಷರಾದ ಮಾಧವ ಬಂಗೇರ, ರತ್ನಾಕರ ಪಿ.ಎಂ., ಅಬ್ದುಲ್ ಹಮೀದ್
ಸುದ್ದಿಗೋಷ್ಠಿಯಲ್ಲಿದ್ದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318