ಜ್ಞಾನ ಮತ್ತು ಮಾನವನ್ನು ಜತನದಿಂದ ಕಾಪಾಡಿದಾಗ ಬದುಕು ಹಸನಾಗುತ್ತದೆ-ಒಡಿಯೂರು ಶ್ರೀ

ಬಂಟ್ವಾಳ: ಪ್ರಾಣದೇವರ ಉಪಾಸನೆಯಿಂದ ಜ್ಞಾನ ವೃದ್ಧಿಯಾಗುತ್ತದೆ. ಜ್ಞಾನ ಮತ್ತು ಮಾನವನ್ನು ಜತನದಿಂದ ಕಾಪಾಡಿದಾಗ ಬದುಕು ಹಸನಾಗುತ್ತದೆ ಎಂದು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.


ಸುಮಾರು ೧.೫ ಕೋ.ರೂ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ತ್ಯಾಗ, ಸೇವೆಗಳ ಪ್ರತೀಕ ಹನುಮ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ಹೊಸ್ತಿಲಲ್ಲಿ ಉರುಡಾಯಿಯಲ್ಲಿ ಮುಖ್ಯಪ್ರಾಣನ ದೇಗುಲವು ಪುನರ್ ನಿರ್ಮಾಣಗೊಂಡಿರುವುದು ರಾಷ್ಟ್ರ ಅಭಿವೃದ್ಧಿಯ ಸಂಕೇತ ಎಂದು ಸ್ಚಾಮೀಜಿ ಹೇಳಿದರು.
ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಮತ್ತೆ ಶಾಸಕನನ್ನಾಗಿ ಆಯ್ಕೆ ಮಾಡಿದ ಕ್ಷೇತ್ರದ ಜನತೆಗೆ ಅಭಾರಿಯಾಗಿದ್ದೇನೆ. ಮತ್ತೊಮ್ಮೆ ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಲಭಿಸಿದೆ. ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜೇಶ್ ನಾಯ್ಕ್ ಹೇಳಿದರು.
ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಸೂರ್ಯನಾರಾಯಣ ಭಟ್ ಕಶೆಕೋಡಿ ಧಾರ್ಮಿಕ ಉಪನ್ಯಾಸ ನೀಡಿದರು.
ಕಾಡಬೆಟ್ಟು ಚಂದ್ರನಿಲಯ ಕೀರ್ತಿರಾಜ್ ಜೈನ್, ನಿವೃತ್ತ ಮುಖ್ಯ ಶಿಕ್ಷಕ ಗಂಗಾಧರ ರೈ ಮಾಣಿ, ವೈದ್ಯ ಡಾ.ರವಿ ಶರ್ಮ ವಾಮದಪದವು, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಂಟ್ವಾಳ ಅಧಿಕಾರಿ ಮಾಧವ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ, ಗೌರವ ಸಲಹೆಗಾರರರಾದ ಸುಲೋಚನಾ ಜಿ.ಕೆ.ಭಟ್, ಕಾರ್ಯಾಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ವೀರೇಂದ್ರ ಅಮೀನ್ ವಗ್ಗ, ಪ್ರಧಾನ ಕಾರ್ಯದರ್ಶಿ ಅನಂತರಾಮ ನಾಯಕ್, ಕೋಶಾಧಿಕಾರಿ ಜಯರಾಮ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಅದ್ಯಕ್ಷ ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ಆಡಳಿತ ಸಮಿತಿ ಕಾರ್ಯದರ್ಶಿ ಸುರೇಶ್ ಉರುಡಾಯಿ ವಂದಿಸಿದರು. ಶಿಕ್ಷಕರಾದ ಧರಣೇಂದ್ರ ಕುಮಾರ್ ಜೈನ್ ಮತ್ತು ಹರಿಪ್ರಸಾದ್ ಆರ್. ಕಾರ್ಯಕ್ರಮ ನಿರೂಪಿಸಿದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318