ಯುವವಾಹಿನಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 17ರಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ “ಸಂವೇದನೆ” ಮಹಿಳಾ ಸ್ವಾವಲಂಬನೆಯ ಸವಾಲುಗಳು ಮಾಹಿತಿ ಕಾರ್ಯಾಗಾರ(ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ, ಯುವವಾಹಿನಿ ಕಂಕನಾಡಿ ಘಟಕದ ಆತಿಥ್ಯದಲ್ಲಿ, ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ದಕ್ಷಿಣಕನ್ನಡ ಜಿಲ್ಲಾ ಸಮಿತಿಯ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 17ರಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಚೆನ್ನಮ್ಮ ಜಾರಪ್ಪ ಮೆಮೊರಿಯಲ್ ಹಾಲ್ ನಲ್ಲಿ “ಸಂವೇದನೆ” ಮಹಿಳಾ ಸ್ವಾವಲಂಬನೆಯ ಸವಾಲುಗಳು ಮಾಹಿತಿ ಕಾರ್ಯಾಗಾರ ನಡೆಯಲಿದೆ.


ಮಂಗಳೂರು ಗೋಕರ್ಣನಾಥೇಶ್ವರ ಕಾಲೇಜಿನ ಅಧ್ಯಕ್ಷ ವಸಂತ ಕಾರಂದೂರು ಉದ್ಘಾಟಿಸುವರು. ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ವಹಿಸುವರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ ಅಧ್ಯಕ್ಷತೆಯಲ್ಲಿ ಸಮಾರೋಪ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ.ದಿನವಿಡೀ ವಿವಿಧ ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಹಾಗೂ ಸಾಧಕಿಯರಿಗೆ ಸನ್ಮಾನ ನಡೆಯಲಿದೆ.