ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಗೆ 40ನೇ ವರ್ಷದ ಸಂಭ್ರಮ ಸಡಗರ. ಊರಿನಲ್ಲಿ ಹಬ್ಬದ ವಾತಾವರಣ. 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ-ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನಕ್ಕೆ(ನಾಳೆ) ಸಜ್ಜಾಗಿದೆ ಪುಂಜಾಲಕಟ್ಟೆ ಬಂಗ್ಲೆ ಮೈದಾನ (ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)

ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ ಗೆ 40ನೇ ವರ್ಷದ ಸಂಭ್ರಮ, ಸಡಗರ. ಊರಿನಲ್ಲಿ ಹಬ್ಬದ ವಾತಾವರಣ. 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನಕ್ಕೆ (ಮಾ.24ರಂದು) ಸಜ್ಜಾಗಿದೆ ಪುಂಜಾಲಕಟ್ಟೆಯ ಬಂಗ್ಲೆ ಮೈದಾನ.
ವಿಶಾಲವಾದ ಸಭಾಂಗಣ, ಭವ್ಯವಾದ ವೇದಿಕೆ, ಆಕರ್ಷಣೀಯ ಮದುವೆ ಮಂಟಪ, ತಳಿರುತೋರಣಗಳ ಶೃಂಗಾರದೊಂದಿಗೆ ವಧುವರರನ್ನು, ಬಂಧುಮಿತ್ರರನ್ನು, ಗಣ್ಯರನ್ನು, ಸಾರ್ವಜನಿಕರನ್ನು ಸ್ವಾಗತಿಸಲು ಬಂಗ್ಲೆ ಮೈದಾನ ಅಣಿಯಾಗಿದೆ


ಕಳೆದ ನಲ್ವತ್ತು ವರ್ಷಗಳಿಂದ ಆರೋಗ್ಯ, ಕ್ರೀಡೆ, ಕಲೆ, ಸಾಂಸ್ಕ್ರತಿಕ, ಧಾರ್ಮಿಕ, ಸಾಮಾಜಿಕ ರಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರೊಂದಿಗೆ ಆರ್ಥಿಕವಾಗಿ ಹಿಂದುಳಿದವರ ಮದುವೆಯನ್ನು ಸಾಮೂಹಿಕ ವಿವಾಹದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ

ತುಂಗಪ್ಪ ಬಂಗೇರಾ ನೇತೃತ್ವ:

ಜಿಲ್ಲಾ ಪಂಚಾಯತು ಮಾಜಿ ಉಪಾಧ್ಯಕ್ಷ, ಕ್ರಿಯಾಶೀಲ ಸಮಾಜ ಸೇವಕ, ಸಂಘಟನಾ ಚತುರ, ಧಾರ್ಮಿಕ ನೇತಾರ, ಸಹಕಾರಿ ಧುರೀಣ, ಸಾಮೂಹಿಕ ವಿವಾಹದ ರೂವಾರಿ ಎಂ.ತುಂಗಪ್ಪ ಬಂಗೇರಾ ನೇತೃತ್ವದಲ್ಲಿ ಪ್ರಶಾಂತ್ ಪುಂಜಾಲಕಟ್ಟೆ ಅಧ್ಯಕ್ಷತೆಯಲ್ಲಿ ನಡೆಯುವ ಸಾಮೂಹಿಕ ವಿವಾಹ ಸಮಾರಂಭಕ್ಕೆ ವ್ಯಾಪಕ ಸಿದ್ಧತೆ ನಡೆದಿದ್ದು ಕೊಂಬು ಕಹಳೆ ಮೊಳಗಲು ಕ್ಷಣಗಣನೆ ಆರಂಭಗೊಂಡಿದೆ.

ವೈಭವದ ದಿಬ್ಬಣ:

ಈ ಬಾರಿ ಮುಂಬಯಿ ಉದ್ಯಮಿ ಕಕ್ಯಪದವು ನಾರಾಯಣ ಶೆಟ್ಟಿ ಅವರ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಮದುವೆ ಮಂಟಪದವರೆಗೆ ವೈಭವಯುತವಾದ ವಧು-ವರರ ದಿಬ್ಬಣ ಮೆರವಣಿಗೆ ನಡೆಯಲಿದೆ.

6 ಜೋಡಿಗಳಿಗೆ ಮಾಂಗಲ್ಯ ಭಾಗ್ಯ:

ಮಧ್ಯಾಹ್ನ 11.21ರ ಶುಭ ಮುಹೂರ್ತದಲ್ಲಿ 6 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಸಭಾ ಕಾರ್ಯಕ್ರಮ:

ನವದೆಹಲಿ ಅನಾರೋಕ್ ಸಂಸ್ಥೆಯ ವೈಸ್‌ಚೆಯರ್‌ಮೇನ್ ಸಂತೋಷ್ ಕುಮಾರ್ ಜೆ.ಪಿ. ಸಭಾ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಲಿರುವರು. ಸಂಸದ ನಳಿನ್ ಕುಮಾರ್ ಕಟೀಲು ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿರುವರು. ಉಡುಪಿ ಜಿಲ್ಲೆ ಹೆಚ್ಚುವರಿ ನ್ಯಾಯಾಧೀಶ ದಿನೇಶ ಹೆಗ್ಡೆ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಂಗಳ ಸೂತ್ರ ವಿತರಿಸಲಿರುವರು.ಉದ್ಯಮಿ ಅಬ್ದುಲ್ ಕುಂಞಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಅವರು ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ ಮಾಡುವರು. ವಿವಿಧ ಕ್ಷೇತ್ರದ ಅನೇಕ ಗಣ್ಯರು ಭಾಗವಹಿಸುವರು ಎಂದು ಸಂಘಟಕರಾದ ಎಂ.ತುಂಗಪ್ಪ ಬಂಗೇರಾ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ:

ಸಭಾ ಕಾರ್ಯಕ್ರಮದಲ್ಲಿ ಸಂತೋಷ್ ಕುಮಾರ್ ಜೆ.ಪಿ.(ಉದ್ಯಮ ), ಸಂತೋಷ್ ಕುಮಾರ್ ತುಂಬೆ (ಶಿಕ್ಷಣ ), ಅನ್ವೇಷ್ ಆರ್.ಶೆಟ್ಟಿ (ಯಕ್ಷಗಾನ), ಸದಾನಂದ ಅಮೀನ್ ಮಲ್ಪೆ (ಉದ್ಯಮ), ರಾಜು ಮಣಿಹಳ್ಳ (ದೈವ ನರ್ತನ), ಹಂಝ ಬಸ್ತಿಕೋಡಿ (ಸಮಾಜ ಸೇವೆ) ಅವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಮನೋಜ್ ಕನಪಾಡಿ (ಕಲೆ), ಭಾಸ್ಕರ ರಾವ್‌ಬಿ.ಸಿ.ರೋಡ್ (ಸಂಗೀತ), ಹೇಮಚಂದ್ರ ಸಿದ್ದಕಟ್ಟೆ( ಸಂಘಟನೆ), ಸಂದೀಪ್ ಸಾಲ್ಯಾನ್ (ಪತ್ರಕರ್ತ), ಚಂದ್ರಪ್ಪ ಮದ್ದಡ್ಕ (ಶಿಕ್ಷಣ)ಅವರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ಮಾಡಲಾಗುತ್ತಿದೆ.

ಸಾಂಸ್ಕ್ರತಿಕ ವೈಭವ:

ಬೆಳಗ್ಗೆ ಕುಣಿತ ಭಜನೆ ಸ್ಪರ್ಧೆ, ಮಧ್ಯಾಹ್ನ ಸಾರ್ವಜನಿಕರಿಗೆ ವಿವಾಹ ಭೋಜನ, ಬಳಿಕ ಪುಂಜಾಲಕಟ್ಟೆ ನಾರಾಯಣ ಗುರು ವಸತಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಪ್ರದರ್ಶನವಿದೆ.ರಾತ್ರಿ ಡ್ಯಾನ್ಸ್ ಪರ್ಬ ನಡೆಯಲಿದೆ.
ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರಾ, ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಮತ್ತು ಪದಾಧಿಕಾರಿಗಳು ಹಾಗೂ ಸ್ವಯಂಸೇವಕರ ತಂಡ ಕಾರ್ಯಕ್ರಮದ ಯಶಸ್ವಿಯಲ್ಲಿ ತೊಡಗಿಸಿಕೊಂಡಿದೆ.


———————————-++++
ಗೋಪಾಲ ಅಂಚನ್
ಸಂಪಾದಕರು
ಯುವಧ್ವನಿ ನ್ಯೂಸ್ ಕರ್ನಾಟಕ