ಯುವ ಸಮುದಾಯ ಮೋದಿ ಪರ, ಗೆಲವು ನಿಶ್ಚಿತ-ರಾಜೇಶ್ ನಾಯ್ಕ್ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್ ಕರ್ನಾಟಕ)
ಬಂಟ್ವಾಳ: ಯುವ ಸಮುದಾಯ ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಪರವಾಗಿದ್ದು, ಗೆಲುವು ನಿಶ್ವಿತವಾಗಿದೆ, ಗೆಲುವಿನ ಅಂತರವನ್ನು ಹೆಚ್ಚು ಮಾಡಲು ಬಂಟ್ವಾಳದ ಕಾರ್ಯಕರ್ತರು ಶಕ್ತಿ ನೀಡುತ್ತಾರೆ ಎಂಬ ನಂಬಿಕೆಯಿದ್ದು, ಮುಂದಿನ ದಿನಗಳು ಬಿಜೆಪಿಯ ದಿನಗಳಾಗುತ್ತದೆ, ಈ ಬಗ್ಗೆ ಯಾವುದೇ ಸಂಶಯಬೇಡ ಎಂದು
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು .
ಅವರು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಬಿಜೆಪಿ ಮಂಡಲದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.
ಲೋಕ ಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಎ.4 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಆ ದಿನ ಬಂಟ್ವಾಳದಿಂದ ಅತ್ಯಧಿಕ ಸಂಖ್ಯೆಯ ಕಾರ್ಯಕರ್ತರು ಅಭ್ಯರ್ಥಿ ಜೊತೆಯಲ್ಲಿ ಸಾಗಬೇಕು, ಆ ಮೂಲಕ ಎದುರಾಳಿಗೆ ಸ್ಪಷ್ಟವಾದ ಸಂದೇಶವನ್ನು ನೀಡಬೇಕು ಎಂದು ಅವರು ತಿಳಿಸಿದರು.
![](https://www.yuvadhvani.com/wp-content/uploads/2024/04/IMG-20240402-WA0005-1024x683.jpg)
ಲೋಕ ಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಅಭೂತಪೂರ್ವ ಸಾಧನೆಗೆ ನಮ್ಮ ಮತವನ್ನು ನೀಡುವ ಮೂಲಕ ಮೋದಿಯವರ ಹಸ್ತವನ್ನು ಬಲಪಡಿಸೋಣ ಎಂದು ತಿಳಿಸಿದರು.
ಜನರ ಅಭಿಪ್ರಾಯ, ವಿಶ್ವಾಸವನ್ನು ಪಡೆದು ಮತ್ತೆ ಬಿಜೆಪಿ ಪಕ್ಷವನ್ನು ಸದೃಡಗೊಳಿಸಲು ಜನರ ಬಳಿಗೆ ಹೋಗಬೇಕು. ಬಿಜೆಪಿ ನೀಡಿದ ಎಲ್ಲಾ ಭರವಸೆಯನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡಿದ್ದೇವೆ. ಸಂಸದ ನಳಿನ್ ಕುಮಾರ್ ಕಟೀಲು ಅವರ ಅವಧಿಯಲ್ಲಿನ ಅನುಷ್ಠಾನ ಹಂತದಲ್ಲಿರುವ ಎಲ್ಲಾ ಯೋಜನೆಗಳನ್ನು ಶಾಸಕರುಗಳ ಹಾಗೂ ಕಾರ್ಯಕರ್ತರ ಸಹಕಾರದಿಂದ ಅಭಿವೃದ್ಧಿ ಮಾಡುತ್ತೇನೆ ಎಂದು ಅವರು ಹೇಳಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ಪಾಸಿಟಿವ್ ವಿಚಾರಗಳ ಜೊತೆ ಕಾಂಗ್ರೆಸ್ ನ ದುರಾಡಳಿದ ಅವಸ್ಥೆಯನ್ನು ಕಾರ್ಯಕರ್ತರು ಪ್ರತಿಯೊಬ್ಬರಿಗೂ ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಭಿವೃದ್ಧಿಗೆ ಒಂದು ರೂಪಾಯಿಯನ್ನು ನೀಡಿಲ್ಲ ಎಂಬ ವಿಚಾರವನ್ನು ತಿಳಿಸುವ ಕಾರ್ಯ ಆಗಬೇಕಾಗಿದೆ ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ , ಬಂಟ್ವಾಳ ಕ್ಷೇತ್ರ ಬಿಜೆಪಿಯ ಶಕ್ತಿಯಾಗಿದೆ, ಇಲ್ಲಿಂದಲೇ ಹೆಚ್ಚಿನ ಅಂತರದ ಗೆಲುವನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಾಣ ಮಾಡುವಲ್ಲಿ ಸಹಕಾರ ನೀಡಿ ಎಂದು ವಿನಂತಿ ಮಾಡಿದರು.
ವೇದಿಕೆಯಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ನಾಗರಾಜ ಶೆಟ್ಟಿ, ಚುನಾವಣಾ ಜಿಲ್ಲಾ ಸಂಚಾಲಕ ನಿತಿನ್ ಕುಮಾರ್ ಬಂಟ್ವಾಳ, ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಜಗದೀಶ್ ಶೇಣವ, ಕಿಯೋನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ,ನಗರ ನೀರು ಮತ್ತು ನೈರ್ಮಲ್ಯ, ಒಳಚರಂಡಿ ನಿಗಮದ ಮಾಜಿ ನಿರ್ದೇಶಕಿ ಸುಲೋಚನ ಜಿ.ಭಟ್, ಪ್ರದಾನ ಕಾರ್ಯದರ್ಶಿಗಳಾದ ಪ್ರೇಮಾನಂದ, ಯತೀಶ್ , ಬಂಟ್ವಾಳ ಮಂಡಲದ ಮಾಜಿ ಅಧ್ಯಕ್ಷ ದೇವಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಬಂಟ್ಚಾಳ ಮಂಡಲದ ಅಧ್ಯಕ್ಷ ಚೆನ್ನಪ ಕೋಟ್ಯಾನ್ ಸ್ವಾಗತಿಸಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ವಂದಿಸಿದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.
![](https://www.yuvadhvani.com/wp-content/uploads/2022/05/20220513_121927-scaled.jpg)
![](https://www.yuvadhvani.com/wp-content/uploads/2022/05/20220513_120825-scaled.jpg)
![](https://www.yuvadhvani.com/wp-content/uploads/2022/05/20220513_105219.jpg)
![](https://www.yuvadhvani.com/wp-content/uploads/2022/05/20220513_110701-scaled.jpg)
![](https://www.yuvadhvani.com/wp-content/uploads/2022/05/20220513_114558-scaled.jpg)
![](https://www.yuvadhvani.com/wp-content/uploads/2022/05/20220513_123305-scaled.jpg)