ಅಕ್ಷರ ಭಾರತಿ ವಿದ್ಯಾಲಯ ಆಲದಪದವು: ಎಸ್ಎಸ್ಎಲ್ ಸಿಯಲ್ಲಿ ಶೇ.100 ಫಲಿತಾಂಶ, ಮಾನ್ಯ ಪ್ರಥಮ ( ಗೋಪಾಲ ಅಂಚನ್, ಯುವಧ್ವನಿ ನ್ಯೂಸ್, ಕರ್ನಾಟಕ)

ಬಂಟ್ವಾಳ: ಆಲದಪದವು ಅಕ್ಷರ ಭಾರತಿ ವಿದ್ಯಾಲಯವು ಎಸ್ಎಸ್ಎಲ್ ಸಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ವಿದ್ಯಾರ್ಥಿನಿ ಮಾನ್ಯ 591 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕು.ಶೆರ್ಲಿನ್ 548 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಮತ್ತು ಕು.ಅಕಾಂಕ್ಷ 543 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.


ಪರೀಕ್ಷೆಗೆ ಹಾಜರಾದ ಒಟ್ಟು 16 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು
7 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 6 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶಾಲಾ ಸಂಚಾಲಕ ಮೋಹನ್ ರೈ, ಮುಖ್ಯ ಶಿಕ್ಷಕ ಮತ್ತು ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.