ಸಿದ್ಧಕಟ್ಟೆ: ಬೆಳೆ ಸಮೀಕ್ಷೆ ತರಬೇತಿ

ಯುವಧ್ವನಿ ನ್ಯೂಸ್

ಸಿದ್ಧಕಟ್ಟೆ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ತಾಲೂಕು ಪಂಚಾಯತು ಬಂಟ್ವಾಳ, ಕೃಷಿ ಇಲಾಖೆ ಬಂಟ್ಚಾಳ ಹಾಗೂ ರೋಟರಾಕ್ಟ್ ಕ್ಲಬ್ ಸಿದ್ಧಕಟ್ಟೆ ಕಾಲೇಜು ಆಶ್ರಯದಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೆಳೆ ಸಮೀಕ್ಷೆ ತರಬೇತಿ ಕಾರ್ಯಾಗಾರ ನಡೆಯಿತು.ತರಬೇತುದಾರರಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಕೇಶವಸ್ವಾಮಿ ಮಾಹಿತಿ ನೀಡಿದರು. ಕಾಲೇಜು ಪ್ರಾಂಶುಪಾಲೆ ಸೌಮ್ಯ ಕೆ. ಅಧ್ಯಕ್ಷತೆ ವಹಿಸಿದ್ದರು.
ರೋಟರಿ ಕ್ಲಬ್ ಕಾರ್ಯದರ್ಶಿ ರಮೇಶ್ ನಾಯಕ್, ತಾಲೂಕು ಪಂಚಾಯತು ನಿಕಟಪೂರ್ವ ಸದಸ್ಯ ಪ್ರಭಾಕರ ಪ್ರಭು, ರೋಟರಿ ನಿರ್ದೇಶಕರಾದ ಕಿರಣ್ ಮಂಜಿಲ ಮತ್ತು ಹರಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ತರಬೇತುದಾರರು ಬೆಳೆ ಸಮೀಕ್ಷೆ ಜೊತೆಗೆ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿ ವೇತನ, ಸರಕಾರದಿಂದ ಸಿಗುವ ಕೃಷಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.