“ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ” ಲೋಕಾರ್ಪಣೆ ಚೆನ್ನೈತ್ತೋಡಿಯಲ್ಲಿ ನೇರ ಪ್ರಸಾರ

ವಾಮದಪದವು: ವಿಧಾನಸೌಧದಲ್ಲಿ ಭಾನುವಾರ ನಡೆದ “ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ” ಲೋಕಾರ್ಪಣೆ ಕಾರ್ಯಕ್ರಮದ ನೇರ ಪ್ರಸಾರವು ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತು ಅಧ್ಯಕ್ಷೆ ಭಾರತಿ ರಾಜೇಂದ್ರ, ಬಂಟ್ವಾಳ ತಾಲೂಕಿನ ಕೃಷಿ ಅಧಿಕಾರಿ ನಂದನ್ ಶೆಣೈ, ಪಂಚಾಯತು ಉಪಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಪಂಚಾಯಿತಿಯ ಲೆಕ್ಕ ಸಹಾಯಕ ಅಧಿಕಾರಿ ಭಾಸ್ಕರ್. ಟಿ, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು, ಊರಿನ ರೈತರು, ರೈತರ ಮಕ್ಕಳು ಭಾಗಿಯಾಗಿದ್ದರು.