ಇರ್ವತ್ತೂರುಪದವು 15ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ- ನಿವೃತ್ತ ಶಿಕ್ಷಕಿಗೆ ಸನ್ಮಾನ

ವಾಮದಪದವು: ಇರ್ವತ್ತೂರು ಪದವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆದ 15 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.


ಇದೇ ಸಂದರ್ಭ ಮೂಡುಪಡುಕೋಡಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿಗೊಂಡ ವಸಂತಿ ಜಿ.ಕೆ.ಭಟ್ ಅವರನ್ನು ಶಾಸಕರು ಸನ್ಮಾನಿಸಿದರು.


ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪೂಜಾರಿ,
ಸಮಿತಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ, ಗೌರವ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಗ್ರಾಮ ಪಂಚಾಯತು ಅಧ್ಯಕ್ಷ ಎಂ.ಪಿ.ಶೇಖರ್, ಸಮಿತಿ ಪ್ರಮುಖರಾದ ಪ್ರಶಾಂತ್ ಕೊಟ್ಯಾನ್, ದೇವಪ್ಪ ಶೆಟ್ಟಿ, ಸತೀಶ್ ಕರ್ಕೇರ, ಶುಭಕರ ಶೆಟ್ಟಿ, ಪ್ರಶಾಂತ ಜೈನ್, ವಿಜಯ, ಸುಚಿತ್ರ ಶೆಟ್ಟಿ, ಶಂಕರ್ ಶೆಟ್ಟಿ, ಜಯನಂದ ಕುಲಾಲ್,
ರಂಜಿತ್ ಶೆಟ್ಟಿ, ಗಂಗಾಧರ್ ಶೆಟ್ಟಿ, ಉಮಾನಾಥ, ಅಶೋಕ್ ಪೂಜಾರಿ, ಡಿ.ಎನ್ ಗಂಗಯ್ಯ, ಅರ್ಚಕರಾದ ಗೋಪಾಲಕೃಷ್ಣ ಭಟ್, ಶಂಕರ್ ಭಟ್ ಮೊದಲಾದವರಿದ್ದರು.