ಬಿ.ರಮಾನಾಥ ರೈ ಹುಟ್ಟುಹಬ್ಬ, ವಾಮದಪದವು ವಲಯ ಕಾಂಗ್ರೆಸ್ ವತಿಯಿಂದ ಆಹಾರ ಕಿಟ್ ವಿತರಣೆ

ವಾಮದಪದವು: ಮಾಜಿ ಸಚಿವ ಬಿ.ರಮಾನಾಥ ರೈಯವರ ಹುಟ್ಟುಹಬ್ಬದ ಪ್ತಯುಕ್ತ ವಾಮದಪದವು ವಲಯ  ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ   ಕೊರೊನಾ ವಾರಿಯರ‍್ಸ್ ಸಹಿತ ಅರ್ಹ ಫಲಾನುಭವಿಗಳಿಗೆ ಆಹಾರ ಕಿಟ್ ವಿತರಿಸಲಾಯಿತು.
 ವಾಮದಪದವು ಕರಿಮಲೆ ದಿ.ರಮೇಶ್ ಪೈ   ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ
 ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿದ್ದರು.
ವಾಮದಪದವು ಪ್ರದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮಾಜಿ ಸಚಿವ ರಮಾನಾಥ ರೈ ಅವರ ಕೊಡುಗೆ ಅನನ್ಯವಾದುದು. ಈ ಪ್ರದೇಶದಲ್ಲಿ ಹಲವಾರು ಶಾಶ್ವತ ಯೋಜನೆಗಳು,  ಮೂಲ ಭೂತ ಸೌಲಭ್ಯಗಳ ಸಹಿತ ಶಿಕ್ಷಣ,  ಆರೋಗ್ಯ ಕ್ಷೇತ್ರಗಳಿಗೆ ಸಂಬಂಧಿಸಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ರೈ ಅವರು ನಡೆಸಿದ್ದಾರೆ ಎಂದು ಕುಂದರ್ ಹೇಳಿದರು.


  ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮಾತನಾಡಿ, ಭ್ರಷ್ಟಾಚಾರ ರಹಿತರಾಗಿ ಸರಳ ರಾಜಕಾರಣಿಯಾಗಿ ಜನಸೇವೆ ನಡೆಸಿದ ರಮನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಆಹಾರ ಕಿಟ್ ವಿತರಿಸುವ  ಮೂಲಕ ವಾಮದಪದವು ವಲಯ ಕಾಂಗ್ರೆಸ್ ಸಮಿತಿ ಮಾದರಿಯಾಗಿದೆ ಎಂದರು.  
ಸೋಮವಾರ ನಿಧನರಾದ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
  ಅಜ್ಜಿಬೆಟ್ಟು ಮಾಗಣೆ ತಂತ್ರಿ ಶ್ರೀಪಾದ ಪಾಂಗಣ್ಣಾಯ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್ , ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷೆ ಭಾರತಿ ರಾಜೇಂದ್ರ, ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ವಲಯ ಕಾಂಗ್ರೇಸ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಎಪಿಎಂಸಿ ಮಾಜಿ ಸದಸ್ಯೆ ಭಾರತಿ ಎಸ್. ರೈ, ಪಂಚಾಯತ್ ಮಾಜಿ ಅಧ್ಯಕ್ಷ ಸಿ. ಶ್ರೀಧರ್‌ಜಿ.ಪೈ, ಕಿಸಾನ್ ಘಟಕ ಅಧ್ಯಕ್ಷ ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,ಅಕ್ಷರ ದಾಸೋಹ,  ಆರೋಗ್ಯ ಇಲಾಖೆ ಸಿಬಂದಿಗಳಿಗೆ ಮತ್ತು ವಿಕಲಚೇತನರಿಗೆ ಆಹಾರ ಕಿಟ್ ವಿತರಿಸಲಾಯಿತು.